Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:17 - ಕನ್ನಡ ಸತ್ಯವೇದವು J.V. (BSI)

17 ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಎಕುಚ್ ಎಕ್ ತಾಸಾತ್ ತಿಚಿ ಹಿ ಸಗ್ಳಿ ಅಸ್ತಿ ಕಳ್ದುನ್ ಘೆಟ್ಲಿನ್!” ಮನ್ತ್ಯಾತ್. ಸಗ್ಳ್ಯಾ ಮೊಟ್ಯಾ ಮೊಟ್ಯಾ ಢೊನಿಯಾ ಚಾಲ್ವುತಲ್ಯಾಂಚಿ ಮುಖಂಡಾ, ಅನಿ ತ್ಯಾತುರ್ನ್ನಾ ಫಿರುನ್ ಖೆಳ್ತಲಿ ಲೊಕಾ, ಢೊನ್ ಚಾಲ್ವುತಲೆ ಲೊಕಾ, ಅನಿ ಸಮುಂದರಾಚ್ಯಾ ವೈನಾ ಜಿವನ್ ಕರ್ತಲಿ ಸಗ್ಳಿ ಲೊಕಾ, ಧುರುಚ್ ಇಬೆ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:17
11 ತಿಳಿವುಗಳ ಹೋಲಿಕೆ  

ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ ನಿಮ್ಮ ಆಶ್ರಯವು ಹಾಳಾಯಿತು.


ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ, ವೈಧವ್ಯ, ಇವೆರಡೂ ನಿನಗುಂಟಾಗುವವು; ನೀನು ಎಷ್ಟು ಮಾಟಮಾಡಿದರೂ ಎಷ್ಟೇ ಮಂತ್ರತಂತ್ರಗಳನ್ನು ನಡಿಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.


ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.


ನೀನು ಕಂಡ ಆ ಹತ್ತು ಕೊಂಬುಗಳು ಅಂದರೆ ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ಅರಸುಗಳು. ಅವರು ಒಂದು ಗಳಿಗೆಯವರೆಗೆ ರಾಜರಂತೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು