Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:15 - ಕನ್ನಡ ಸತ್ಯವೇದವು J.V. (BSI)

15 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯೆಚ್ಯಾ ತೊಂಡಾತ್ನಾ ಎಕ್ ಧಾರ್‍ಲೊ ಮೊಟೊ ಚಾಕು ಭಾಯ್ರ್ ಯೆಲೊ, ತ್ಯಾ ಚಾಕ್ವಾನಿ ತೊ ದೆಶಾಕ್ನಿ ಹಾರ್‍ವುನ್ ಟಾಕ್ತಾ. ತೊ ತೆಂಚ್ಯಾ ವರ್ತಿ ಲೊಂಗ್ಟಾಚ್ಯಾ ದಾಂಡ್ಯಾನಿ ರಾಜ್ ಚಾಲ್ವುತಾ, ಅನಿ ತೊ ಸಗ್ಳ್ಯಾನಿಕಿ ಮೊಟ್ಯಾ ದೆವಾಚ್ಯಾ ರಾಗಾಚ್ಯಾ ದ್ರಾಕ್ಷಿ ಮಳ್ತಲ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ ಘಾಲುನ್ ತೊ ಚಿರ್ಡುನ್ ಸೊಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:15
15 ತಿಳಿವುಗಳ ಹೋಲಿಕೆ  

ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವದು.


ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು.


ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ಫಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.


ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


[ಯೆಹೋವನ ಶೂರರೇ,] ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ; ಬನ್ನಿರಿ, ತುಳಿಯಿರಿ; ದ್ರಾಕ್ಷೆಯ ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ಜನಾಂಗಗಳ ದುಷ್ಟತನವು ವಿಪರೀತವೇ ಸರಿ.


ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು