Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:13 - ಕನ್ನಡ ಸತ್ಯವೇದವು J.V. (BSI)

13 ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:13
27 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ ನಾನೂ ಹತ್ತರ ನಿಂತು ಒಪ್ಪಿಕೊಂಡು ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ ಅಂದೆನು.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.


ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.


ನೀವು ಕರೆಸಿಕೊಳ್ಳುವ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ;


ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮಹಾಯಾಜಕರಿಂದ ಹೊಂದಿದ್ದಾನೆ ಅಂದನು.


ಇದಲ್ಲದೆ ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು