Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:18 - ಕನ್ನಡ ಸತ್ಯವೇದವು J.V. (BSI)

18 ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಥೈಟಿರಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ದೆವಾಚ್ಯಾ ಲೆಕಾಕ್ನಾ ಅನಿ ಪೆಟ್ತಲ್ಯಾ ಆಗಿ ಸರ್ಕೆ ಡೊಳೆ ಅನಿ ಪವಿತ್ರ್ ಕರಲ್ಲ್ಯಾ ಪಿತ್ಳಿ ತಾಂಬ್ಯಾಚ್ಯಾ ಸಾರ್ಕೆ ಹೊಳ್ವಳ್ತಲೆ ಪಾಂಯೆ ಅಸಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:18
22 ತಿಳಿವುಗಳ ಹೋಲಿಕೆ  

ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಪವಿತ್ರವಾದ ಆತ್ಮವುಳ್ಳವನಾಗಿದ್ದು ಸತ್ತಮೇಲೆ ಜೀವಿತನಾಗಿ ಎದ್ದು ಬಂದ ಮಹತ್ಕಾರ್ಯದಿಂದ ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.


ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು