Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:21 - ಕನ್ನಡ ಸತ್ಯವೇದವು J.V. (BSI)

21 ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ತಿಕಾ ತಿಚ್ಯಾ ಪಾಪಾನಿತ್ನಾ ಭಾಯ್ರ್ ಯೆವ್ಕ್ ಎಳ್ ದಿಲ್ಲೊ ಹಾಯ್, ಖರೆ ತಿಕಾ ತ್ಯಾ ಅನೈತಿಕ್ ಸಮಂದಾತ್ನಾ ಭಾಯ್ರ್ ಯೆವ್ಕ್ ಮನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:21
9 ತಿಳಿವುಗಳ ಹೋಲಿಕೆ  

ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.


ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು