Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:22 - ಕನ್ನಡ ಸತ್ಯವೇದವು J.V. (BSI)

22 ಇಗೋ, ಅವಳು ಹಾಸಿಗೆಯ ಮೇಲೆ ಬಿದ್ದುಕೊಂಡಿರುವಂತೆ ಮಾಡುವೆನು, ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಮನಸ್ಸನ್ನು ದೇವರ ಕಡಗೆ ತಿರುಗಿಸಿಕೊಂಡು ಅವಳ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಗೋ ನೋಡು, ಅವಳು ರೋಗದಿಂದ ಹಾಸಿಗೆ ಹಿಡಿಯುವಂತೆ ಮಾಡುತ್ತೇನೆ. ಅವಳೊಡನೆ ವ್ಯಭಿಚಾರ ಮಾಡುವವರು ಅವಳ ದುಷ್ಕೃತ್ಯಗಳನ್ನು ತ್ಯಜಿಸಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗದೆಹೋದರೆ, ಅವರು ಭೀಕರ ಕಷ್ಟನಷ್ಟಗಳಿಗೆ ಗುರಿಯಾಗುವಂತೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಮಿಯಾ ತಿಕಾ ಸಿಕ್ ಹೊವ್ನ್ ಹಾತ್ರಾನಾತ್ ಪಡಿಸರ್ಕೆ ಕರ್ತಾ. ಥೈ ತಿ ಅನಿ ತಿಚ್ಯಾ ವಾಂಗ್ಡಾ ವೆಭಿಚಾರ್ ಕರ್‍ತಲ್ಲ್ಯಾಕ್ನಿ ಮೊಟೊ ಸಂಕಟ್ ಹೊತ್ತಾ.ತೆಚೊ ಮನ್ ಬದ್ಲುಕ್ ನಸಲ್ಲ್ಯಾರ್ ಮಿಯಾ ಹೆ ಅತ್ತಾಚ್ ಕರ್ತಾ. ಸಮಂದ್ ಥವ್ನ್ ಘೆಟಲ್ಲೆ ತರಾಸ್ ಕರುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:22
16 ತಿಳಿವುಗಳ ಹೋಲಿಕೆ  

ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -


ಎಲ್ಲಾ ಜನಾಂಗಗಳು ಅವಳ ಅತಿಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳು ಸುಖಭೋಗಿನಿಯಾಗಿದ್ದದರಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.


[ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು