Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:7 - ಕನ್ನಡ ಸತ್ಯವೇದವು J.V. (BSI)

7 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್! ಜೊ ಕೊನ್ ಮೊಟ್ಯಾ ಮಾಪಾನ್ ಜಿಕ್ತಾ ತೆಕಾ ಮಿಯಾ ದೆವಾಚ್ಯಾ ಮಳ್ಯಾತ್ಲ್ಯಾ ಜಿವ್‍ ದಿತಲ್ಯಾ ಝಾಡಾಚೆ ಹನ್ನ್ ಖಾತಲೊ ಹಕ್ಕ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:7
36 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ಕಿವಿಯುಳ್ಳವನು ಕೇಳಲಿ.


ಕಿವಿಯುಳ್ಳವನು ಕೇಳಲಿ, ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯಬೇಕು. ಇದರಲ್ಲಿ ದೇವಜನರ ತಾಳ್ಮೆಯೂ ನಂಬಿಕೆಯೂ ತೋರಿಬರುತ್ತವೆ.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.


ಕಿವಿಯುಳ್ಳವನು ಕೇಳಲಿ ಅಂದನು.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.


ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಹೊರಗಿನಿಂದ ಮನುಷ್ಯನೊಳಕ್ಕೆ ಹೋಗಿ ಅವನನ್ನು ಹೊಲೆಮಾಡತಕ್ಕಂಥದು ಒಂದೂ ಇಲ್ಲ; ಆದರೆ ಮನುಷ್ಯನೊಳಗಿಂದ ಹೊರಡುವವುಗಳೇ ಮನುಷ್ಯನನ್ನು ಹೊಲೆಮಾಡುವಂಥವುಗಳಾಗಿವೆ ಎಂದು ಹೇಳಿದನು.


ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮುಚ್ಚಲಾರದೆ ಹೋದವು; ತುರಾಯಿಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ; ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.


ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು.


ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಒಂದು ನೂರರಷ್ಟು ಫಲವನ್ನು ಕೊಟ್ಟವು ಎಂದು ಹೇಳಿ - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.


ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ. ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು