Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:6 - ಕನ್ನಡ ಸತ್ಯವೇದವು J.V. (BSI)

6 ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ತೆನಿ, “ತೆ ಪುರಾ ಹೊಲೆ! ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಮಿಯಾಚ್ ಆರಂಬ್ ಅನಿ ಅಂತ್. ಜೆ ಕೊನ್ ಸೊಸೆನ್ ಹಾಯ್ ತೆಕಾ ಮಿಯಾ ಜಿವ್ ದಿತಲ್ಯಾ ಪಾನಿಯಾಚ್ಯಾ ಝರ್‍ಯಾತ್ಲೆ ಪಾನಿ ಫಿತಲೊ ಹಕ್ಕ್ ಫುಕೊಟ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:6
26 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.


ನಾನೇ ಆದಿಯೂ ಅಂತವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.


ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.


ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ಆ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ರತ್ನ ಕಟ್ಟಿಗೆ ಹುಲ್ಲು ಆಪು ಮುಂತಾದವುಗಳಲ್ಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;


ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು