Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:11 - ಕನ್ನಡ ಸತ್ಯವೇದವು J.V. (BSI)

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆ ಕೊನ್ ವಾಯ್ಟ್ ಕರುಲ್ಯಾತ್ ತೆನಿ ವಾಯ್ಟ್ ಕರುನ್ಗೆತುಚ್ ರ್‍ಹಾಂವ್ದಿತ್. ಜೊ ಕೊನ್ ಬರ್ಸೊ ಹೊಲ್ಲೊ ಹಾಯ್ ತೊ ಅನಿಉಲ್ಲೆ ಅಪ್ನಾಕುಚ್ ಬರ್ಶೆ ಕರುನ್ ಘೆಂವ್ದಿತ್; ಜೆ ಕೊನ್ ಬರಿ ಕಾಮಾ ಕರುಲ್ಯಾತ್ ತೆನಿ ಬರಿ ಕಾಮಾ ಕರುನ್ಗೆತುಚ್ ರಾಂವ್ದಿತ್, ಅನಿ ಜೆ ಕೊನ್ ಪವಿತ್ರ್ ಹಾತ್ ತೆನಿ ಪವಿತ್ರ್ ಹೊವ್ನುಚ್ ರಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:11
22 ತಿಳಿವುಗಳ ಹೋಲಿಕೆ  

ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಅವರು ಕೊಂಡುಕೊಳ್ಳಲಿಕ್ಕೆ ಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಕ್ಕೆ ಹೋದರು. ಬಾಗಿಲು ಮುಚ್ಚಲಾಯಿತು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಅದನ್ನು ಕಳಂಕ ಸುಕ್ಕು ಮುಂತಾದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ ನಿರ್ದೋಷವೂ ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಮಾಡಿದನು.


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಮಳೆ ತುಂಬಿದ ಮೋಡಗಳು ಭೂವಿುಯ ಮೇಲೆ ಸುರಿದುಬಿಡುವವು; ಮರವು ತೆಂಕಣಕ್ಕಾಗಲಿ ಬಡಗಣಕ್ಕಾಗಲಿ ಬಿದ್ದರೆ ಬಿದ್ದ ಹಾಗೆಯೇ ಇರುವದು.


ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು.


ಆತನು ನಿಮ್ಮನ್ನು ಸಹ ತನ್ನ ಕುಮಾರನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ಈಗ ಸಂಧಾನಪಡಿಸಿಕೊಂಡಿದ್ದಾನೆ; ಮತ್ತು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು