Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:6 - ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಅವನು ನನಗೆ - ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ; ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತಿಳಿಯಪಡಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ದೆವಾಚ್ಯಾ ದುತಾನ್ ಮಾಕಾ,“ಹ್ಯಾ ಗೊಸ್ಟಿಯಾ ಖರ್‍ಯಾ ಅನಿ ಬರೊಸೊ ಕರುಕ್ ಯೊಗ್ಯ್ ಹಾತ್. ಸರ್ವೆಸ್ವರ್ ದೆವಾನ್ ಪ್ರವಾದ್ಯಾಕ್ನಿ ಪವಿತ್ರ್ ಆತ್ಮೊ ದಿಲ್ಲ್ಯಾನ್, ಅಪ್ನಾಚ್ಯಾ ಸೆವಕಾಕ್ನಿ ಲಗ್ಗುನಾಚ್ ಕಾಯ್ ಘಡ್ನಾರ್ ಹಾಯ್ ಮನುನ್ ದಾಕ್ವುಸಾಟ್ನಿ ಅಪ್ನಾಚ್ಯಾ ದೆವ್‍ದುತಾಕ್ ಧಾಡುನ್ ದಿಲ್ಯಾನಾಯ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:6
26 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಆದರೆ ದೇವರು ತಾನು ನೇವಿುಸಿದ ಕ್ರಿಸ್ತನು ಬಾಧೆಯನ್ನನುಭವಿಸಿ ಸಾಯಬೇಕೆಂಬದಾಗಿ ಎಲ್ಲಾ ಪ್ರವಾದಿಗಳ ಬಾಯಿಂದ ಮುಂಚಿತವಾಗಿ ಹೇಳಿಸಿದ ಮಾತನ್ನು ಹೀಗೆ ನೆರವೇರಿಸಿದನು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ಸುವಾರ್ತೆಯನ್ನು ಸಾರಿ ಹೇಳಿಸುತ್ತೇನೆಂದು ದೇವರು ಮುಂಚಿತವಾಗಿ ಪವಿತ್ರಶಾಸ್ತ್ರಗಳಲ್ಲಿ ತನ್ನ ಪ್ರವಾದಿಗಳ ಮೂಲಕ ಮಾತುಕೊಟ್ಟನು.


ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿ ಅವೆ.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ಫರೋಹನಿಗೆ ಕನಸು ಎರಡು ವಿಧವಾಗಿ ಬಿದ್ದದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನೆಂಬದಾಗಿ ತಿಳುಕೊಳ್ಳಬೇಕು.


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,


ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.


ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.


ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡುತ್ತಾ - ಬಾ, ಯಜ್ಞದ ಕುರಿಯಾದಾತನಿಗೆ ಹೆಂಡತಿಯಾಗತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿ


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು