Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:11 - ಕನ್ನಡ ಸತ್ಯವೇದವು J.V. (BSI)

11 ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಲಗ್ಗುನಾಚ್ ಯೆವ್ಲಾಲಾ. ಜೆ ಕಾಯ್ ತುಮ್ಚ್ಯಾಕ್ಡೆ ಹಾಯ್ ತೆ ಬರೆ ಕರುನ್ ಸಂಬಾಳುನ್ ಘೆವ್ನ್ ರ್‍ಹಾವಾ, ಅಸೆ ರ್‍ಹಾಲ್ಯಾರ್ ತುಮ್ಕಾ ನಾಹೊಲ್ಯಾರ್ ತುಮಿ ಜಿಕಲ್ಲ್ಯಾ ಭೊಮಾನಾ ಕೊನಾಕ್‍ಬಿ ಚೊರುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:11
19 ತಿಳಿವುಗಳ ಹೋಲಿಕೆ  

ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ನಿಮಗಿರುವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವದಿಲ್ಲವೆಂಬದೇ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಇದಲ್ಲದೆ ಯಾವನಾದರೂ ರಂಗಸ್ಥಳದಲ್ಲಿ ಎದುರಾಳಿನೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವದಿಲ್ಲ.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.


ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ಅದರಲ್ಲಿ ಹೋರಾಡುವವರೆಲ್ಲರು ಎಲ್ಲಾ ವಿಷಯಗಳಲ್ಲಿ ವಿುತವಾಗಿರುತ್ತಾರೆ. ಅವರು ಬಾಡಿಹೋಗುವ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆ ಮಾಡುವವರಾಗಿದ್ದೇವೆ.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.


ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು