Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:8 - ಕನ್ನಡ ಸತ್ಯವೇದವು J.V. (BSI)

8 ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಚಾರಿಬಿ ಸಾವ್ಜಾಕ್ನಿ ಸಾ-ಸಾ ಫಾಕಾಟೆ ಹೊತ್ತೆ, ಅನಿ ತೆಂಕಾ ಭಾಯ್ಲ್ಯಾ ಬಾಜುನ್‍ಬಿ ಭುತ್ತುರ್ಲ್ಯಾ ಬಾಜುನ್‍ಬಿ ಡೊಳೆಚ್ ಡೊಳೆ ಹೊತ್ತೆ. ದಿಸ್ ರಾತ್ ತೆನಿ, “ಪವಿತ್ರ್, ಪವಿತ್ರ್,ಪವಿತ್ರ್, ಸರ್ವ ಶಕ್ತಿಮಾನ್ ದೆವ್, ತೊ ಸಗ್ಳ್ಯಾನಿಕಿ ಮೊಟೊ, ಜೊ ಹೊತ್ತೊ, ಜೊ ಅತ್ತಾ ಹಾಯ್, ಅನಿಫಿಡೆ ತೊ ಯೆತಲೊ ಹಾಯ್”. ಮನುನ್ ಗಿತ್ ಗಾವ್ತಲೆ ಕನ್ನಾಬಿ ಬಂದ್ ಕರಿನಸಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:8
42 ತಿಳಿವುಗಳ ಹೋಲಿಕೆ  

ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.


ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.


ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.


ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಸಹೋದರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿರುವದಷ್ಟೆ.


ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.


ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು.


ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯರೂಪದಂತಿತ್ತು.


ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;


ಕೆರೂಬಿಗಳ ಬೆನ್ನು, ಕೈ, ರೆಕ್ಕೆ ಅಂತು ಸರ್ವಾಂಗಗಳಲ್ಲಿಯೂ ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಯಜ್ಞದ ಕುರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು. ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು - ಬಾ ಎಂದು ಗುಡುಗಿನಂತಿದ್ದ ಸ್ವರದಿಂದ ಹೇಳುವದನ್ನು ಕೇಳಿದನು.


ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.


ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು -


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.


ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು