Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:9 - ಕನ್ನಡ ಸತ್ಯವೇದವು J.V. (BSI)

9 ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ, ಸುಳ್ಳಿ ಘೆವ್ನ್ ಛಪ್ಪೆ ಫೊಡುನ್ ತಿ ಉಗ್ಡುಕ್ ತಿಯಾಚ್ ಯೊಗ್ಯ್. ತುಕಾ ಅದ್ದಿ ಜಿವಾನಿ ಮಾರುನ್ ಹೊಲ್ಲೆ, ಅನಿ ತಿಯಾ ಬಲಿ ಹೊವ್ನ್ ಮರಲ್ಲ್ಯಾ ವೈನಾ. ತಿಯಾ ಹರಿಎಕ್ ಕುಳ್, ಬಾಶಾ, ದೆಶಾ, ಅನಿ ಜಾತಿಯಾನಿತ್ನಾ ಲೊಕಾಕ್ನಿ ದೆವಾಸಾಟಿ ಇಕಾತ್ ಘೆಟ್ಲೆಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:9
41 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಿಹೋಗುವದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ ಕುಲ ಪ್ರಜೆಗಳವರಿಗೂ ಸಕಲ ಭಾಷೆಗಳನ್ನಾಡುವವರಿಗೂ ಸಾರಿಹೇಳುವದಕ್ಕೆ ನಿತ್ಯವಾದ ಶುಭವರ್ತಮಾನವು ಅವನಲ್ಲಿತ್ತು.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.


ಯಾಹುವಿಗೆ ಸ್ತೋತ್ರ! ಯೆಹೋವನಿಗೆ ನೂತನಕೀರ್ತನೆಯನ್ನು ಹಾಡಿರಿ; ಭಕ್ತಸಭೆಯಲ್ಲಿ ಆತನನ್ನು ಸ್ತುತಿಸಿರಿ.


ಆತನ ಘನಕ್ಕಾಗಿ ನೂತನಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಸಕಲ ಪ್ರಜೆ ಕುಲ ಭಾಷೆ ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು; ಅವುಗಳನ್ನು ಸಮಾಧಿಯಲ್ಲಿ ಇಡಗೊಡಿಸುವದಿಲ್ಲ.


ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು; ಹತ್ತು ತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.


ಆಗ ಸಾರುವವನು ಗಟ್ಟಿಯಾಗಿ ಕೂಗಿ - ವಿವಿಧ ಜನಾಂಗ ಕುಲಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ -


ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರೆಂಬರ್ಥವನ್ನು ವ್ಯಕ್ತಪಡಿಸುತ್ತಾರೆ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ -


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ


ಆಮೇಲೆ - ಇನ್ನೂ ನೀನು ಅನೇಕವಾಗಿರುವ ಪ್ರಜೆ ಜನ ಭಾಷೆ ರಾಜ ಇವರ ವಿಷಯದಲ್ಲಿ ಪ್ರವಾದನೆ ಹೇಳಬೇಕೆಂದು ನನಗೆ ತಿಳಿಸಲ್ಪಟ್ಟಿತು.


ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು