Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:15 - ಕನ್ನಡ ಸತ್ಯವೇದವು J.V. (BSI)

15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಚೆಸಾಟ್ನಿ ತೆನಿ ದಿಸ್ ರಾತ್ ದೆವಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ತ್ಯೆಚ್ಯಾ ಗುಡಿತ್ ತೆಚೆ ಆರಾದನ್ ಕರ್‍ತ್ಯಾತ್. ಸಿವಾಸನಾ ವರ್ತಿ ಬಸಲ್ಲೊ ಅಪ್ನಿ ತೆಂಚ್ಯಾ ಮದ್ದಿ ಹಾಜರ್ ಹೊಲ್ಲ್ಯಾ ವೈನಾ ತೆಂಚಿ ರಾಕನ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:15
25 ತಿಳಿವುಗಳ ಹೋಲಿಕೆ  

ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಇಸ್ರಾಯೇಲ್ ದೇವರಾದ ಯೆಹೋವನು ತನ್ನ ಪ್ರಜೆಗೆ ವಿಶ್ರಾಂತಿಯನ್ನು ಅನುಗ್ರಹಿಸಿ ಸದಾಕಾಲವೂ ಯೆರೂಸಲೇವಿುನಲ್ಲಿ ವಾಸಿಸುವವನಾದದರಿಂದ


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು ಎಂದು ಹೇಳಿದನು.


ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ನಾನು ನಿಮ್ಮ ನಡುವೆ ನಿವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವದಿಲ್ಲ;


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ


ಅದು ಬಾಯಿತೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ ಆತನ ನಿವಾಸವನ್ನೂ ಪರಲೋಕ ನಿವಾಸಿಗಳನ್ನೂ ದೂಷಿಸಿತು.


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು