Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:16 - ಕನ್ನಡ ಸತ್ಯವೇದವು J.V. (BSI)

16 ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಫಿಡೆ ಕನ್ನಾಬಿ ತೆಂಕಾ ಭುಕ್ ಹೊಂವ್ದಿತ್ ಸೊಸ್ ಹೊಂವ್ದಿತ್ ಲಾಗಿನಾ; ನಿಂಬಾರ್ ಹೊಂವ್ದಿತ್ ಅನಿ ಕಸ್ಲೊಬಿ ಝಳ್ ಹೊಂವ್ದಿತ್ ತೆಂಕಾ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:16
23 ತಿಳಿವುಗಳ ಹೋಲಿಕೆ  

ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಹಗಲಲ್ಲಿ ಸೂರ್ಯನೂ ಇರುಳಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.


ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದ ಕಾರಣ ಒಣಗಿಹೋದವು.


ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿರುವದರಿಂದ ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಉರಿಗೊಂಡು ತೋಟಗಳನ್ನು ಕಾಯುವದಕ್ಕೆ ಹಾಕಿದರು; ನನ್ನ ತೋಟವನ್ನೋ ನಾನು ಕಾಯಲಿಲ್ಲ.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.


ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದಕಾರಣ ಒಣಗಿಹೋದವು.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು