Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:3 - ಕನ್ನಡ ಸತ್ಯವೇದವು J.V. (BSI)

3 ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಚ್ಯಾ ದುತಾನ್,“ಅಮಿ ಅಮ್ಚ್ಯಾ ದೆವಾಚ್ಯಾ ಸೆವಕಾಕ್ನಿ ಕಪಾಳಾ ವರ್ತಿ ಛಪ್ಪೊ ಮಾರುನ್ ವಳಕ್ ಕರಿ ಪತರ್ ಜಿಮ್ನಿಕ್ ಹೊಂವ್ದಿತ್, ಸಮುಂದರಾಕ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ಕಾಯ್ಬಿ ವಾಯ್ಟ್ ಕರುನಕಾಶಿ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:3
31 ತಿಳಿವುಗಳ ಹೋಲಿಕೆ  

ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಈ ಎರಡನೆಯ ಮೃಗವು - ದೊಡ್ಡವರು ಚಿಕ್ಕವರು ಐಶ್ಚರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂತಲೂ


[ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.


ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.


ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂವಿುಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂವಿುಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿಬೀಸದಂತೆ ಭೂವಿುಯ ಚತುರ್ದಿಕ್ಕುಗಳ ಗಾಳಿಗಳನ್ನು ಹಿಡಿದಿರುವದನ್ನು ಕಂಡೆನು.


ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ -


ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ. ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ.


ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು