Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:1 - ಕನ್ನಡ ಸತ್ಯವೇದವು J.V. (BSI)

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೇ ಹೊತ್ತಿನವರೆಗೂ ಪರಲೋಕವು ನಿಶ್ಶಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಯಜ್ಞದ ಕುರಿಮರಿ ಏಳನೆಯ ಮುದ್ರೆಯನ್ನು ಒಡೆದಾಗ ಸ್ವರ್ಗದಲ್ಲಿ ಅರ್ಧ ಗಂಟೆಯವರೆಗೆ ಮೌನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಬೊಕ್ಡಾನ್ ಸಾತ್ವೆಚೊ ಛಪ್ಪೊ ಫೊಡುನ್ ಉಗಡ್ತಾನಾ, ಸುಮಾರ್ ಅರ್ದೊ ತಾಸ್ ಸರ್ಗಾತ್ ಸಗ್ಳೆ ಶಾಂತ್ ಹೊಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:1
14 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಯೆಹೋವನೋ ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.


ಯಜ್ಞದ ಕುರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು. ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು - ಬಾ ಎಂದು ಗುಡುಗಿನಂತಿದ್ದ ಸ್ವರದಿಂದ ಹೇಳುವದನ್ನು ಕೇಳಿದನು.


ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವದು. ನನ್ನ ರಕ್ಷಣೆಯು ಆತನಿಂದಲೇ.


ನನ್ನ ಕಣ್ಣು ಮುಂದೆ ಒಂದು ರೂಪವು ಇತ್ತು. ನಿಂತಿದ್ದರೂ ಅದು ಏನೆಂಬದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.


ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;


ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.


ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು - ಬಾ ಅನ್ನುವ ಶಬ್ದವನ್ನು ಕೇಳಿದೆನು. ಆಗ ಇಗೋ, ಬೂದಿಬಣ್ಣದ ಕುದುರೆಯು ಕಾಣಿಸಿತು.


ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು. ಆಗ ಇಗೋ, ಕಪ್ಪು ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು .


ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು