Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:5 - ಕನ್ನಡ ಸತ್ಯವೇದವು J.V. (BSI)

5 ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿದ್ದ ಕೆಂಡಗಳಿಂದ ತುಂಬಿಸಿ ಭೂವಿುಗೆ ಬಿಸಾಡಿದನು. ಆಗ ಗುಡುಗುಗಳೂ ವಾಣಿಗಳೂ ವಿುಂಚುಗಳೂ ಭೂಕಂಪವೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ದೆವಾಚ್ಯಾ ದುತಾನ್ ಇಂಗ್ಳೆ ಭರಲ್ಲೆ ತೆ ಧುಪಾಚೆ ಆಯ್ದಾನ್ ಆಲ್ತಾರಿ ವೈನಾ ಘೆಟ್ಲ್ಯಾನ್ ಅನಿ ಜಿಮ್ನಿ ವರ್ತಿ ನ್ಹೆವ್ನ್ ವೊತ್ಲ್ಯಾನ್. ತನ್ನಾ ಮೊಟೊ ಗುಡ್ಗುಡೊ, ಮೊಟ್ಯಾ ಗಜ್ನಿಯಾಂಚೊ ಆವಾಜ್ ಯೆಲೊ,ಲಕ್‍ಲಕ್ಲೆ ಅನಿ ಭುಕಂಪ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:5
24 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.


ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ನಾನು ಬೆಂಕಿಯನ್ನು ಭೂವಿುಯ ಮೇಲೆ ಹಾಕಬೇಕೆಂದು ಬಂದೆನು; ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ!


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು