Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:20 - ಕನ್ನಡ ಸತ್ಯವೇದವು J.V. (BSI)

20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹ್ಯಾ ಸಂಕಟಾನಿತ್ನಾ ಹುರಲ್ಲಿ ಲೊಕಾ, ತೆನಿ ಕಾಯ್-ಕಾಯ್ ಕರಿತ್ ತ್ಯಾತುರ್‍ನಾ ಭಾಯ್ರ್ ಪಡುಕ್ ನತ್ತಿ, ತೆನಿ ಸೈತಾನಾಚಿ ಪುಜಾ ಕರ್ತಲೆ, ನಾಹೊಲ್ಯಾರ್ ಸೊನ್ಯಾಚ್ಯಾ, ಚಾಂದಿಚ್ಯಾ, ತಾಂಬ್ಯಾಚ್ಯಾ, ಗುಂಡ್ಯಾಚ್ಯಾ, ಅನಿ ನಾಕ್ಡಾಚ್ಯಾ, ದಿಸಿನಸಲ್ಲ್ಯಾ, ಆಯ್ಕಿನಸಲ್ಲ್ಯಾ, ಚಲಿನಸಲ್ಲ್ಯಾ ಮುರ್ತಿಯಾಂಚಿ ಪುಜಾ ಕರ್ತಲೆ ಸೊಡುಕ್ ನತ್ತ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:20
43 ತಿಳಿವುಗಳ ಹೋಲಿಕೆ  

ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.


ಇದಲ್ಲದೆ ತಾವು ನಡಿಸುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳೊಳಗೆ ಒಂದನ್ನೂ ಬಿಟ್ಟು ಮಾನಸಾಂತರ ಮಾಡಿಕೊಳ್ಳಲಿಲ್ಲ.


ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಕೈಗಳಿಂದ ಮಾಡಿದ ವಸ್ತುಗಳಲ್ಲಿ ಉಲ್ಲಾಸಪಟ್ಟರು.


ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ನಾನು ತಿರಿಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ನಾಚಿಕೆಗೆ ಗುರಿಮಾಡಾನೆಂತಲೂ, ಪೂರ್ವದಲ್ಲಿ ಬಂಡುತನ ಹಾದರತನ ಪೋಕರಿತನಗಳನ್ನು ನಡಿಸಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯ ಉಂಟು.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ನಾವು ದೇವರ ಸಂತಾನದವರಾಗಿದ್ದ ಮೇಲೆ ದೈವವು ಮನುಷ್ಯನ ಶಿಲ್ಪವಿದ್ಯೆಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸದಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡೆನು ಎಂಬದೇ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯುತ್ತಿರುವದು, ಆರಿಹೋಗುವದಿಲ್ಲ ಅನ್ನುತ್ತಾನೆ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.


ನಾಲ್ಕನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯ್ದನು; ಆಗ ಸೂರ್ಯನಿಗೆ ಕಡುಬಿಸಿಲಿನಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.


ಬೆಸಿಗೆ ಚೆನ್ನಾಗಿದೆ ಎಂದು ಹೇಳಿ ಶಿಲ್ಪಿಯು ಎರಕದವನನ್ನೂ ಸುತ್ತಿಗೆಯಿಂದ ಸಮತಟ್ಟುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು; ವಿಗ್ರಹವನ್ನು ಅಲುಗದಂತೆ ಮೊಳೆಗಳಿಂದ ಬಿಗಿದರು.


ಇವರ ದೇಶವು ವಿಗ್ರಹಗಳಿಂದಲೂ ತುಂಬಿದೆ, ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ದ್ರಾಕ್ಷಾರಸವನ್ನು ಕುಡಿದು ಬಂಗಾರಬೆಳ್ಳಿ ತಾಮ್ರಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.


ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಕೇಡನ್ನುಂಟುಮಾಡುತ್ತವೆ.


ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು