Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:5 - ಕನ್ನಡ ಸತ್ಯವೇದವು J.V. (BSI)

5 ಇವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಪೀಡಿಸುವದಕ್ಕೆ ಅಪ್ಪಣೆಯಾಯಿತು. ಅವರಿಗುಂಟಾದ ಪೀಡೆಯು ಚೇಳು ಮನುಷ್ಯನನ್ನು ಹೊಡೆಯುವದರಿಂದುಂಟಾಗುವ ಪೀಡೆಗೆ ಸಮಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲದೆ, ಅವರನ್ನು ಕೊಲ್ಲದೆಯೇ ಐದು ತಿಂಗಳಕಾಲ ಬಾಧಿಸಬೇಕೆಂದು ಆಜ್ಞಾಪಿಸಲಾಗಿತ್ತು. ಆ ಬಾಧೆ, ಚೇಳು ಕುಟುಕಿದರೆ ಉಂಟಾಗುವ ಬಾಧೆಯಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನಗಳಿಗೆ ಐದು ತಿಂಗಳ ಕಾಲ ನೋವು ಉಂಟುಮಾಡುವಂತಹ ಶಕ್ತಿಯನ್ನು ಈ ಮಿಡತೆಗಳಿಗೆ ಕೊಡಲಾಯಿತು. ಆದರೆ ಜನರನ್ನು ಕೊಲ್ಲುವ ಶಕ್ತಿಯನ್ನು ಮಿಡತೆಗಳಿಗೆ ಕೊಡಲಿಲ್ಲ. ಈ ಮಿಡತೆಗಳು ಕುಟುಕಿದಾಗ ಚೇಳು ಕುಟುಕಿದಷ್ಟೇ ನೋವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವುಗಳು ಅವರನ್ನು ಕೊಲ್ಲದೆ, ಐದು ತಿಂಗಳುಗಳವರೆಗೆ ಯಾತನೆಪಡಿಸುವುದಕ್ಕೆ ಅಧಿಕಾರ ಕೊಡಲಾಯಿತು. ಅವರ ಯಾತನೆಯು, ಚೇಳು ತನ್ನ ಕೊಂಡಿಯಿಂದ ಮನುಷ್ಯರನ್ನು ಕುಟುಕಿಹಾಕಿದಾಗ ಆಗುವ ನೋವಿನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತ್ಯಾ ಠೊಳಾಕ್ನಿ ಹ್ಯಾ ಲೊಕಾಕ್ನಿ ಜಿವಾನ್ ಮಾರ್ತಲೊ ಅದಿಕಾರ್ ನತ್ತೊ ಖಾಲಿ ಪಾಚ್ ಮ್ಹಯಿನೆ ತೆಂಕಾ ತರಾಸ್ ದಿತಲೊ ಎವ್ಡೊಚ್ ಅದಿಕಾರ್ ದಿಲ್ಲೊ ಹೊತ್ತೊ. ಹ್ಯಾ ಠೊಳಾಂಚ್ಯಾ ವೈನಾ ತೆಂಕಾ ಯೆತಲೊ ತರಾಸ್ ಮಾನ್ಸಾಕ್ ಇಂಚ್ವಾನ್ ಚಾವಲ್ಲ್ಯಾ ತನ್ನಾ ಹೊತಾ ತಸ್ಲ್ಯಾ ತರಾಸಾ ಸರ್ಕೊಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:5
12 ತಿಳಿವುಗಳ ಹೋಲಿಕೆ  

ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು.


ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ಹೊಗೆಯೊಳಗಿಂದ ವಿುಡಿತೆಗಳು ಭೂವಿುಯ ಮೇಲೆ ಹೊರಟುಬಂದವು. ಭೂವಿುಯಲ್ಲಿರುವ ಚೇಳುಗಳಿಗೆ ಸಾಮರ್ಥ್ಯವಿರುವ ಪ್ರಕಾರ ಅವುಗಳಿಗೆ ಸಾಮರ್ಥ್ಯ ಕೊಡಲ್ಪಟ್ಟಿತು.


ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ಮತ್ತು ನಾಲ್ವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡೋಣವಾಯಿತು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.


ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರು ಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.


ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು