Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:18 - ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:18
38 ತಿಳಿವುಗಳ ಹೋಲಿಕೆ  

ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ ನೀನು ನಂಬಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷವಿುಸಲಿಲ್ಲ.


ಅವರು ದೇವರ ಕಟ್ಟಳೆಗಳಿಗೆ ವಿರೋಧವಾಗಿ ನಿಂತು ಪರಾತ್ಪರನ ಸಂಕಲ್ಪವನ್ನು ನಿರಾಕರಿಸಿದ್ದರಿಂದ


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ಯೆಹೋವನು ಇಂತೆನ್ನುತ್ತಾನೆ - ಪಾತ್ರೆಯಲ್ಲಿ ಕುಡಿಯುವದು ಯಾರ ಪಾಲಿಗೆ ಬರಲಿಲ್ಲವೋ ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿಯಲೇ ಕುಡಿಯುವಿ.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;


ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ ಅವರಿಗೆ - ನಾನು ಅಪರಾಧಿಯೆಂದು ಈಗ ಒಪ್ಪಿಕೊಂಡೆನು; ಯೆಹೋವನು ನ್ಯಾಯವಂತನು, ನಾನೂ ನನ್ನ ಜನರೂ ದೋಷಿಗಳು.


ಯೆಹೋವನೇ, ನೀನು ನೀತಿಸ್ವರೂಪನು; ನಿನ್ನ ವಿಧಿಗಳು ನ್ಯಾಯವಾಗಿವೆ.


ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ಆ ದಿನದಲ್ಲಿ ಯುವಕರೂ ಸುಂದರಯುವತಿಯರೂ ಬಾಯಾರಿಕೆಯಿಂದ ಮೂರ್ಛೆ ಹೋಗುವರು.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು