Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:10 - ಕನ್ನಡ ಸತ್ಯವೇದವು J.V. (BSI)

10 ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:10
26 ತಿಳಿವುಗಳ ಹೋಲಿಕೆ  

ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.


ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟು ಸುತ್ತಿಕೊಂಡಿದ್ದಾರೆ; ತಮ್ಮ ತಮ್ಮ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಇಳಿದು ಹೋಗಿದ್ದಾರೆ.


ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ!


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು.


ನನ್ನ ಮೇಲೆ ಇದನ್ನು ಹೇರಿದವನು ಯೆಹೋವನೇ ಎಂದು ಅವನು ಏಕಾಕಿಯಾಗಿ ಕೂತುಬಾಯಿ ಬಿಡದಿರಲಿ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.


ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.


ಆ ದಿನದಲ್ಲಿ ಯುವಕರೂ ಸುಂದರಯುವತಿಯರೂ ಬಾಯಾರಿಕೆಯಿಂದ ಮೂರ್ಛೆ ಹೋಗುವರು.


ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.


[ದೇಶವೇ,] ತನ್ನ ಯೌವನಕಾಲದ ಪತಿಯ ವಿಯೋಗದುಃಖದಿಂದ ಗೋಣಿತಟ್ಟನ್ನುಟ್ಟುಕೊಂಡು ಗೋಳಾಡುವ ಯುವತಿಯಂತೆ ಗೋಳಾಡು.


ನಿನಗಾಗಿ ತಲೆಬೋಳಿಸಿಕೊಂಡು ಗೋಣೀತಟ್ಟು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.


ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.


ಸರದಾರರ ಕೈಗಳನ್ನು ಗಲ್ಲಿಗೆ ನೇತಕಟ್ಟಿದರು; ವೃದ್ಧರು ಮಾನಭಂಗಪಟ್ಟರು.


ಯೆಹೋವನ ಉಗ್ರದೃಷ್ಟಿಯು ಅವರನ್ನು ಚದರಿಸಿದೆ; ಆತನು ಇನ್ನು ಕಟಾಕ್ಷಿಸನು. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕೆಟ್ಟು ಅಲೆಯುತ್ತಾರೆ; ಚಿಕ್ಕತನದಿಂದಲೂ ಸಕಲಾತಿಯನ್ನು ಹೊದೆಯುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಮತ್ತು ಸುಗಂಧಕ್ಕೆ ಬದಲಾಗಿ ಕೊಳೆ, ನಡುಪಟ್ಟಿಯಿದ್ದಲ್ಲಿ ಹಗ್ಗ, ಅಂದವಾಗಿ ಸೆಕ್ಕಿದ ಜಡೆಯ ಸ್ಥಾನದಲ್ಲಿ ಬೋಡು, ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀಪಟ್ಟಿ, ಬೆಡಗಿಗೆ ಬದಲಾಗಿ ಬರೆ, ಇವು ಆಗುವವು.


ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ


ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು