Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:12 - ಕನ್ನಡ ಸತ್ಯವೇದವು J.V. (BSI)

12 ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು ಅಸುರುಸುರಾಗಿ ಅಮ್ಮಾ ತಿನ್ನಲಿಕ್ಕೆ ಇಲ್ಲವೋ, ಕುಡಿಯಲಿಕ್ಕೆ ಇಲ್ಲವೋ ಎಂದು ಗೋಳಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಮಕ್ಕಳು ತಮ್ಮ ತಾಯಂದಿರನ್ನು, “ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?” ಎಂದು ಕೇಳುತ್ತಿದ್ದಾರೆ. ಅವರು ಅಸುನೀಗುವಾಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣಬಿಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಗರದ ಬೀದಿಗಳಲ್ಲಿ ಗಾಯಪಟ್ಟವರ ಹಾಗೆ ಮೂರ್ಛೆ ಹೋದಾಗ, ತಮ್ಮ ತಾಯಂದಿರ ಎದೆಯಲ್ಲಿ ಪ್ರಾಣ ಸುರಿದಾಗ, “ತಿನ್ನಲಿಕ್ಕೆ ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ?” ಎಂದು ತಮ್ಮ ತಾಯಂದಿರಿಗೆ ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:12
9 ತಿಳಿವುಗಳ ಹೋಲಿಕೆ  

ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.


ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.


ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಯಂತೆ ಬೀದಿಗಳೆಲ್ಲಾ ಕೂಡುವ ಚೌಕದಲ್ಲಿ ಬಿದ್ದಿದ್ದಾರೆ; ಯೆಹೋವನ ರೋಷವನ್ನೂ ನಿನ್ನ ದೇವರ ತರ್ಜನವನ್ನೂ ಹೊಟ್ಟೆ ತುಂಬಾ ಕುಡಿದಿದ್ದಾರೆ.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಫಳಾದೆನಲ್ಲಾ [ಎಂದು ಪ್ರಲಾಪಿಸುತ್ತಾಳೆ].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು