Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:22 - ಕನ್ನಡ ಸತ್ಯವೇದವು J.V. (BSI)

22 ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:22
16 ತಿಳಿವುಗಳ ಹೋಲಿಕೆ  

ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.


ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು - ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ವಿುಸ್ಸಾಬೀಬ್ ಎಂದು ಹೇಳಿದ್ದಾನೆ.


ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿಗಳಿಗೂ ಅಶುಭವುಂಟಾಗುವದು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.


ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು