Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:58 - ಕನ್ನಡ ಸತ್ಯವೇದವು J.V. (BSI)

58 ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ ನನ್ನ ಪ್ರಾಣವನ್ನು ಉಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 “ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. ನನ್ನ ಪ್ರಾಣವನ್ನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:58
13 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವದಿಲ್ಲ.


ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.


ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.


ನನ್ನ ತುಟಿಗಳೂ ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿ - ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂಥ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ ಅಂದನು. ಅನಂತರ ಅವನು ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು;


ಹೀಗಿರಲು ಆತನು ಕಾಣುವದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಬಿದ್ದೇ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳಾನೇ?


ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;


ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.


ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, ಅವರಿಗಿಂತ ಬಲಿಷ್ಟರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು; ಆಮೇಲೆ ಯೆರೆಮೀಯನು [ಹಿಂದಿನಂತೆ] ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು