Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:8 - ಕನ್ನಡ ಸತ್ಯವೇದವು J.V. (BSI)

8 ದಾಸರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾಸರುಗಳೇ ನಮಗೆ ದಣಿಗಳಾದರು ಅವರಿಂದ ನಮ್ಮನ್ನು ಬಿಡಿಸುವವರಾರೂ ಇಲ್ಲವಾದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:8
12 ತಿಳಿವುಗಳ ಹೋಲಿಕೆ  

(ಯೆಹೋವನು ಇಂತೆನ್ನುತ್ತಾನೆ - ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು).


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ಯಾವವಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,


ಅವನ ಮಕ್ಕಳು ನಿರಾಶ್ರಯರಾಗಿ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು.


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು