Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:1 - ಕನ್ನಡ ಸತ್ಯವೇದವು J.V. (BSI)

1 ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸತ್ತ ನೊಣಗಳಿಂದ ಉತ್ತಮವಾದ ಪರಿಮಳತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹುಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:1
11 ತಿಳಿವುಗಳ ಹೋಲಿಕೆ  

ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಬುಕ್ಕಿಟ್ಟುಗಾರರ ಪದ್ಧತಿಯ ಮೇರೆಗೆ ವಿುಶ್ರಮಾಡಿ ದೇವರ ಸೇವೆಗಾಗಿ ಅಭಿಷೇಕತೈಲವನ್ನು ಮಾಡಿಸಬೇಕು.


ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚಕೊಟ್ಟಿದ್ದರು.


ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವದು; ಆದದರಿಂದಲೇ ಆತುರದಿಂದ ಮಾತಾಡಿದ್ದೇನೆ.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನು ಇಲ್ಲವೆ ಗುಗ್ಗರಿಯನ್ನು ಅಥವಾ ದ್ರಾಕ್ಷಾರಸವನ್ನು ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವವೋ ಎಂದು ಧರ್ಮವಿಧಿಯನ್ನು ವಿಚಾರಿಸು. [ಪ್ರವಾದಿಯು ಹಾಗೆ ವಿಚಾರಿಸಲು] ಯಾಜಕರು ಇಲ್ಲವೆಂದು ಉತ್ತರ ಕೊಟ್ಟರು.


ಆಮೇಲೆ ಹಗ್ಗಾಯನು - ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವದನ್ನಾದರೂ ಸೋಕಿದರೆ ಅದು ಅಶುದ್ಧವಾಗುವದೋ ಎಂದು ಕೇಳಿದ್ದಕ್ಕೆ ಯಾಜಕರು - ಅಶುದ್ಧವೇ ಆಗುವದು ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು