Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:13 - ಕನ್ನಡ ಸತ್ಯವೇದವು J.V. (BSI)

13 ಅಜ್ಞಾನಿಯ ಮಾತುಗಳ ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರುಳುತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:13
25 ತಿಳಿವುಗಳ ಹೋಲಿಕೆ  

ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ ರೇಗಿದರೂ ನಕ್ಕರೂ ಜಗಳವು ತೀರುವದಿಲ್ಲ.


ಆದರೆ ಮಹಾಯಾಜಕರು ಲಾಜರನನ್ನೂ ಕೊಲ್ಲಬೇಕೆಂದು ಆಲೋಚಿಸಿದರು.


ಆತನು ತೊಳಕೊಳ್ಳದೆ ಊಟಕ್ಕೆ ಕೂತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.


ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಆದರೆ ಫರಿಸಾಯರಲ್ಲಿ ಕೆಲವರು - ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು.


ಅರಸನು ಆಕೆಗೆ - ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ ದ್ರಾಕ್ಷೇ ಆಲೆಯಲ್ಲಾಗಲಿ ಏನಾದರೂ ಉಂಟೋ ಎಂದು ಹೇಳಿ


ಆಗ ಇಸ್ರಾಯೇಲ್ಯರೆಲ್ಲರೂ ಅರಸನ ಮುಂದೆ ಬಂದು ಅವನನ್ನು - ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸನನ್ನೂ ಅವನ ಮನೆಯವರನ್ನೂ ಅವನೊಡನೆ ಇದ್ದ ಜನರನ್ನೂ ಯೊರ್ದನ್‍ಹೊಳೆ ದಾಟಿಸಿ ಕರಕೊಂಡು ಬಂದದ್ದೇಕೆ ಎಂದು ಕೇಳಿದರು.


ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ - ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವದೆಲ್ಲವನ್ನೂ ಕಸಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ ಅಂದರು.


ನಾನು ತಿರುಗಿಕೊಂಡು ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ ವಿಚಾರಿಸಿ ಗ್ರಹಿಸುವದಕ್ಕೂ ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವದಕ್ಕೂ ಮನಸ್ಸಿಟ್ಟೆನು.


ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.


ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳುವಳಿಕೆಯಿಂದ ನಡಿಸುವನು; ಮೂಢನು ತನ್ನ ಮೂರ್ಖತನವನ್ನು ಡಂಭವಾಗಿ ತೋರ್ಪಡಿಸುವನು.


ಬಾಯಿದುಡುಕಬೇಡ, ದೇವರ ಮುಂದೆ ಮಾತಾಡಲು ನಿನ್ನ ಹೃದಯದಲ್ಲಿ ಆತುರಪಡದಿರು; ದೇವರು ಆಕಾಶದಲ್ಲಿದ್ದಾನಲ್ಲವೆ, ನೀನು ಭೂವಿುಯಲ್ಲಿದ್ದೀ; ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು