Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:1 - ಕನ್ನಡ ಸತ್ಯವೇದವು J.V. (BSI)

1 ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:1
40 ತಿಳಿವುಗಳ ಹೋಲಿಕೆ  

ಯೌವನದಲ್ಲಿ ನೊಗಹೊರುವದು ಮನುಷ್ಯನಿಗೆ ಲೇಸು.


ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು.


ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಈಗ ನಾನು ಎಂಭತ್ತು ವರುಷದವನು. ಒಳ್ಳೇದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಸುಮ್ಮನೆ ಯಾಕೆ ಭಾರವಾಗಿರಬೇಕು?


ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.


ಯೆಹೋವನು ಯೋಸೇಫನ ಸಂಗಡ ಇದ್ದದರಿಂದ ಅವನು ಏಳಿಗೆಯಾಗಿ ಐಗುಪ್ತ್ಯನಾದ ತನ್ನ ದಣಿಯ ಮನೆಯೊಳಗೆ ಸೇವಕನಾದನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಕೈಗೂಡಿಸಿದ್ದರಿಂದ ಅವನ ವಶದಲ್ಲಿದ್ದ ಯಾವದೊಂದರ ವಿಷಯದಲ್ಲಿಯೂ ಸೆರೆಮನೆಯ ಯಜಮಾನನು ಏನೂ ಚಿಂತಿಸಲಿಲ್ಲ.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗಿರುವ ಬಾಲಶಿಕ್ಷೆಯನ್ನೂ ಬಾಲೋಪದೇಶವನ್ನೂ ಮಾಡುತ್ತಾ ಅವರನ್ನು ಸಾಕಿ ಸಲಹಿರಿ.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.


ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.


ಅವರ ಕೈಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.


ಇಸ್ರಾಯೇಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವದರಿಂದ ಇವನೊಬ್ಬನೇ ಸಮಾಧಿಹೊಂದುವನು.


ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.


ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.


ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಕೈಕೊಳ್ಳುತ್ತೇನೆ.


ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಹೊಳೆದಾಟಿ ಸ್ವಲ್ಪದೂರಕ್ಕೆ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು