Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:2 - ಕನ್ನಡ ಸತ್ಯವೇದವು J.V. (BSI)

2 ಆ ಕಷ್ಟದ ದಿನಗಳಲ್ಲಿ ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಮೊಬ್ಬಾಗುವವು; ಮಳೆಯಾದ ಮೇಲೆಯೂ ಮೋಡಗಳು ಮತ್ತೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಮುದುಕನಾದಾಗ, ಸೂರ್ಯ, ಚಂದ್ರ, ನಕ್ಷತ್ರಗಳ ಬೆಳಕು ನಿನಗೆ ಕತ್ತಲೆಯಂತೆ ಕಾಣುತ್ತದೆ. ಮಳೆಯಾದ ಮೇಲೆಯೂ ಮತ್ತೆಮತ್ತೆ ಮೋಡಗಳಂತೆ ನಿನ್ನ ಜೀವನದಲ್ಲಿ ಕಷ್ಟಗಳು ತುಂಬಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:2
15 ತಿಳಿವುಗಳ ಹೋಲಿಕೆ  

ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ಮುದುಕನೂ ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆ ಪೀಠದಿಂದ ಹಿಂದಕ್ಕೆ ಬಾಗಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಪಾಲಿಸಿದನು.


ಏಲಿಯು ತೊಂಭತ್ತೆಂಟು ವರುಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.


ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂವಿುಯ ಅಧೋಭಾಗದಿಂದ ಮೇಲೆತ್ತು.


ನಿನ್ನ ಜಲಪಾತಗಳಿಂದುಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕೂಗುತ್ತದೋ ಎಂಬಂತಿರುವದು. ಹಾಗೆಯೇ ನೀನು ಅಲ್ಲಕಲ್ಲೋಲವಾದ [ದುಃಖ ಪ್ರವಾಹದ] ತೆರೆಗಳನ್ನು ನನ್ನ ತಲೆಯ ಮೇಲೆ ದಾಟಿಸಿದಿಯಲ್ಲಾ.


ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;


ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು.


ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಆಕಾಶದ ತಾರೆಗಳೂ ನಕ್ಷತ್ರರಾಶಿಗಳೂ ಬೆಳಗವು, ಸೂರ್ಯನು ಮೂಡುತ್ತಲೇ ಕತ್ತಲಾಗುವನು, ಚಂದ್ರನು ಪ್ರಕಾಶಿಸನು.


ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು