Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:1 - ಕನ್ನಡ ಸತ್ಯವೇದವು J.V. (BSI)

1 ನಾನು ಮನಸ್ಸಿನಲ್ಲಿ, - ಬಾ, ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಸುಖದ ರುಚಿ ನೋಡು ಅಂದುಕೊಂಡೆನು. ಆಹಾ, ಇದೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಈಗ ಬಾ, ಯಾವುದು ಒಳ್ಳೆಯದು ಎಂಬುದನ್ನು ಸುಖಭೋಗಗಳಿಂದ ನಿನ್ನನ್ನು ಪರೀಕ್ಷಿಸುವೆನು,” ಎಂದು ನನ್ನ ಮನಸ್ಸಿನಲ್ಲಿ ಹೇಳಿಕೊಂಡೆ. ಆದರೆ ಅದೂ ಕೂಡ ವ್ಯರ್ಥವಾದದ್ದೆಂದು ರುಜುವಾತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:1
27 ತಿಳಿವುಗಳ ಹೋಲಿಕೆ  

ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.


ಮತ್ತು ಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವದಕ್ಕಿಂತ ಅವನಿಗೆ ಲೋಕದಲ್ಲಿ ಇನ್ನಾವ ಮೇಲೂ ಇಲ್ಲವೆಂದು ಸಂತೋಷವನ್ನೇ ಸ್ತುತಿಸಿದೆನು; ದೇವರು ಅವನಿಗೆ ಲೋಕದಲ್ಲಿ ಅನುಗ್ರಹಿಸುವ ದಿನಗಳಲ್ಲೆಲ್ಲಾ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವದು.


ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನನ್ನ ಸಾನ್ನಿಧ್ಯಕ್ಕೆ ಬಾ ಎಂಬ ನಿನ್ನ ಮಾತಿಗೆ ನಾನು - ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬರಲೇ ಬರುವೆನು ಎಂದು ಉತ್ತರ ಕೊಟ್ಟೆನು.


ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದು ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ; ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ; ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.


ಆಗ ನಾನು - ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುವದು; ನನ್ನ ಹೆಚ್ಚು ಜ್ಞಾನದಿಂದೇನು? ಇದೂ ವ್ಯರ್ಥವಲ್ಲವೆ ಅಂದುಕೊಂಡೆನು.


ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯ ಕೃತ್ಯಗಳನ್ನು ನಡಿಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ತಾನು ಕದಲುವದೇ ಇಲ್ಲ; ತನಗೆ ವಿಪತ್ತು ಎಂದೆಂದಿಗೂ ಸಂಭವಿಸುವದಿಲ್ಲ ಅಂದುಕೊಂಡಿದ್ದಾನೆ.


ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ನಗುವವನಿಗೂ ಮನೋವ್ಯಥೆಯುಂಟು; ಉಲ್ಲಾಸದ ಅಂತ್ಯವು ವ್ಯಾಕುಲವೇ.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.


ಆತನಿಲ್ಲದೆ ಯಾರು ಭೋಜನಮಾಡಿ ಸುಖವನ್ನನುಭವಿಸಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು