Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:10 - ಕನ್ನಡ ಸತ್ಯವೇದವು J.V. (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:10
21 ತಿಳಿವುಗಳ ಹೋಲಿಕೆ  

ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು; ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು.


ಲೋಕದಲ್ಲಿರುವ ಶರೀರದಾಶೆ ಕಣ್ಣಿನಾಶೆ ಬದುಕುಬಾಳಿನ ಡಂಬ ಈ ಮೊದಲಾದವುಗಳೆಲ್ಲವು ತಂದೆಯಿಂದ ಹುಟ್ಟದೆ ಲೋಕದಿಂದ ಹುಟ್ಟಿದವುಗಳಾಗಿವೆ.


ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಲಾಭವೇನು?


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ. ಯುವತಿಯ ಮೇಲೆ ಹೇಗೆ ಕಣ್ಣಿಟ್ಟೇನು?


ತಿರಿಗಿ ತಂದೆತಾಯಿಗಳ ಬಳಿಗೆ ಬಂದು ಅವರಿಗೆ - ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ ಎಂದು ಹೇಳಿದನು.


ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗದು; ಸಮೃದ್ಧಿಯನ್ನು ಬಯಸುತ್ತಲೇ ಇರುವವನಿಗೆ ಆದಾಯವೆಷ್ಟಾದರೂ ಸಾಲದು. ಇದು ಸಹ ವ್ಯರ್ಥ.


ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.


ಅವರು ಸತ್ತಾಗಲೇ ಅವರ ಪ್ರೀತಿಯೂ ಹಗೆಯೂ ಹೊಟ್ಟೇಕಿಚ್ಚೂ ಅಳಿದುಹೋದವು; ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲೇ ಇಲ್ಲ.


ನಾನು ಮನಸ್ಸಿನಲ್ಲಿ, - ಬಾ, ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಸುಖದ ರುಚಿ ನೋಡು ಅಂದುಕೊಂಡೆನು. ಆಹಾ, ಇದೂ ವ್ಯರ್ಥವೇ.


ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.


ಅವನ ಜೀವಮಾನವೆಲ್ಲಾ ಅವನ ಊಟದಲ್ಲಿ ಕತ್ತಲು ಕವಿದಿರುವದು; ಅವನಿಗೆ ಕರಕರೆಯು ಶಾನೆ; ರೋಗರೋಷಗಳು ಇದ್ದೇ ಇರುವವು.


ಮತ್ತು ಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವದಕ್ಕಿಂತ ಅವನಿಗೆ ಲೋಕದಲ್ಲಿ ಇನ್ನಾವ ಮೇಲೂ ಇಲ್ಲವೆಂದು ಸಂತೋಷವನ್ನೇ ಸ್ತುತಿಸಿದೆನು; ದೇವರು ಅವನಿಗೆ ಲೋಕದಲ್ಲಿ ಅನುಗ್ರಹಿಸುವ ದಿನಗಳಲ್ಲೆಲ್ಲಾ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು