Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:18 - ಕನ್ನಡ ಸತ್ಯವೇದವು J.V. (BSI)

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆಲ್ಲಾ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ದುಡಿಮೆಯ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕಲ್ಲಾ ಎಂದು ಲೋಕದಲ್ಲಿ ನಾನು ಪಟ್ಟ ಪ್ರಯಾಸದ ಬಗ್ಗೆ ಬೇಸರಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:18
19 ತಿಳಿವುಗಳ ಹೋಲಿಕೆ  

ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ಹೌದು, ಈ ಉಭಯರಿಗಿಂತಲೂ ಇನ್ನು ಹುಟ್ಟದೆ ಲೋಕದಲ್ಲಿನ ಅಧರ್ಮವನ್ನು ನೋಡದೆ ಇರುವವನೇ ಲೇಸೆಂದು ತಿಳಿದುಕೊಂಡೆನು.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.


ಮನುಷ್ಯನು ಈ ಲೋಕದಲ್ಲಿ ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಏನು ಲಾಭ?


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.


ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ತನ್ನ ಕೆಲಸವನ್ನು ನಡಿಸಿ ಸಾಫಲ್ಯಕ್ಕೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಬಾಧ್ಯತೆಯಾಗಿ ಬಿಡಬೇಕಾಗುವದು. ಇದು ಸಹ ವ್ಯರ್ಥವೂ ಕೇವಲ ಅನ್ಯಾಯವೂ ಆಗಿದೆ.


ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು