Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:21 - ಕನ್ನಡ ಸತ್ಯವೇದವು J.V. (BSI)

21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ತನ್ನ ಕೆಲಸವನ್ನು ನಡಿಸಿ ಸಾಫಲ್ಯಕ್ಕೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಬಾಧ್ಯತೆಯಾಗಿ ಬಿಡಬೇಕಾಗುವದು. ಇದು ಸಹ ವ್ಯರ್ಥವೂ ಕೇವಲ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:21
15 ತಿಳಿವುಗಳ ಹೋಲಿಕೆ  

ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧೆಯುಳ್ಳವನಾಗಿರುವದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು;


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿವಸಗಳಿಂದ ಇಸ್ರಾಯೇಲ್ಯರಲ್ಲಿ ನಡೆಯಲೇ ಇಲ್ಲ. ಯೋಷೀಯನೂ ಯಾಜಕರೂ ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲ್ಯ ಯೆಹೂದ್ಯರೂ ಯೆರೂಸಲೇವಿುನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಹೀಗಿರಲಾಗಿ ಕರ್ತನೇ, ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.


ಯಾರು ವಿಸ್ತಾರವಾದ ಭೂಸ್ಥಿತಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೋ ಅಂಥವರಿಗೂ ಸಮಾಧಿಯೇ ಶಾಶ್ವತಮಂದಿರವು; ಅದೇ ಅವರ ನಿತ್ಯನಿವಾಸಸ್ಥಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು