Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:1 - ಕನ್ನಡ ಸತ್ಯವೇದವು J.V. (BSI)

1 ಪ್ರತಿಯೊಂದು ಕಾರ್ಯಕ್ಕೂ ಕಾಲವು ಕ್ಲುಪ್ತವಾಗಿದೆ; ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:1
12 ತಿಳಿವುಗಳ ಹೋಲಿಕೆ  

ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.


ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ.


ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ.


ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?


ತಕ್ಕ ಉತ್ತರಕೊಡುವವನಿಗೆ ಎಷ್ಟೋ ಉಲ್ಲಾಸ! ಸಮಯೋಚಿತವಾದ ವಚನದಲ್ಲಿ ಎಷ್ಟೋ ಸ್ವಾರಸ್ಯ!


ಆಕಾಶದ ಕೆಳಗೆ ನರಜನ್ಮದವರು ಅಲ್ಪಾಯುಷ್ಯದಲ್ಲಿ ಏನು ಮಾಡುವದು ಯುಕ್ತವೆಂದು ನಾನು ತಿಳಿದುಕೊಳ್ಳುವದಕ್ಕೋಸ್ಕರ ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಉತ್ತೇಜನಮಾಡುವದಕ್ಕೂ ಬುದ್ಧಿಹೀನತೆಯನ್ನು ಅವಲಂಬಿಸುವದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.


ಲೋಕವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದರಿಂದ ಜೀವವೇ ಅಸಹ್ಯವಾಗಿ ತೋರಿತು; ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.


ನಿನ್ನ ಕೆಲಸದ ಸಾಮಾನುಗಳನ್ನು ಸುತ್ತಲು ಅಣಿಮಾಡು, ನಿವೇಶನದಲ್ಲಿ ಸಿದ್ಧಪಡಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.


ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಯುಕ್ತಸಮಯವನ್ನು ಉಪೇಕ್ಷಿಸಿದವನು ಎಂದು ಅಲ್ಲಿ ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು