Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:18 - ಕನ್ನಡ ಸತ್ಯವೇದವು J.V. (BSI)

18 ಮತ್ತೆ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು - ದೇವರು ಮನುಷ್ಯರನ್ನು ಪರೀಕ್ಷಿಸುವದಕ್ಕೂ ಮನುಷ್ಯರು ಪಶುಪ್ರಾಯರಾಗಿದ್ದೇವೆಂದು ತಾವೇ ಗ್ರಹಿಸಿಕೊಳ್ಳುವದಕ್ಕೂ ಆಸ್ಪದವಾಗುವಂತೆ ಇದು ನರಜನ್ಮದವರ ನಿವಿುತ್ತವಾಗಿ ಆಯಿತಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:18
16 ತಿಳಿವುಗಳ ಹೋಲಿಕೆ  

ನಾನು ವಿವೇಕಹೀನಪಾಮರನಾಗಿ ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಿಲ್ಲ; ಪಶುಗಳಂತೆಯೇ ಇಲ್ಲವಾಗುತ್ತಾನೆ.


ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು