Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:3 - ಕನ್ನಡ ಸತ್ಯವೇದವು J.V. (BSI)

3 ಕೊಲ್ಲುವ ಸಮಯ, ಸ್ವಸ್ಥ ಮಾಡುವ ಸಮಯ, ಕೆಡವಿಬಿಡುವ ಸಮಯ, ಕಟ್ಟುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೊಲ್ಲುವ ಸಮಯ, ವಾಸಿಮಾಡುವ ಸಮಯ. ನಾಶಮಾಡುವ ಸಮಯ, ಕಟ್ಟುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:3
21 ತಿಳಿವುಗಳ ಹೋಲಿಕೆ  

ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.


ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಇದನ್ನು ಕೇಳಿ ಯೆಹೋವನ ದೂತನು - ಸೇನಾಧೀಶ್ವರ ಯೆಹೋವನೇ, ನೀನು ಎಪ್ಪತ್ತು ವರುಷಗಳಿಂದ ರೋಷಗೊಂಡಿರುವ ಯೆರೂಸಲೇಮು ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ ಎಂದು ಬಿನ್ನವಿಸಲು


ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಕಿತ್ತುಹಾಕುವದು, ಕೆಡವುವದು, ನಾಶಪಡಿಸುವದು, ಹಾಳುಮಾಡುವದು, ಕಟ್ಟುವದು, ನೆಡುವದು, ಈ ಕಾರ್ಯಗಳನ್ನು ಮಾಡುವದಕ್ಕೋಸ್ಕರ ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇವಿುಸಿದ್ದೇನೆ ಅಂದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆಹೋವನ ಆಲಯವನ್ನು ಕಟ್ಟುವದಕ್ಕೆ ಸಮಯವು ಇನ್ನೂ ಬಂದಿಲ್ಲ ಎಂದು ಈ ಜನರು ಅಂದುಕೊಳ್ಳುತ್ತಾರಲ್ಲಾ.


ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು