Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:14 - ಕನ್ನಡ ಸತ್ಯವೇದವು J.V. (BSI)

14 ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವದು; ಅವನಿಗೆ ಮಗನಿದ್ದರೆ [ಆ ಮಗನಿಗಾಗಿ] ಅವನ ಕೈಯಲ್ಲಿ ಏನೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಅವನು ಯಾವುದೋ ಕೇಡಿಗೆ ಗುರಿಯಾಗಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು; ಕೊನೆಯಲ್ಲಿ ತನ್ನ ಮಗನಿಗೆ ಕೊಡಲು ಅವನಲ್ಲಿ ಏನೂ ಉಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:14
17 ತಿಳಿವುಗಳ ಹೋಲಿಕೆ  

ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ.


ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.


ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;


ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿಹೋಗುವನು; ಅವನು ಪ್ರಯಾಸಪಟ್ಟದ್ದಕ್ಕೆಲ್ಲಾ ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗನು.


ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ಸಿರಿ ಬಂದಾಗ ಹೆರರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ ಜನಸ್ತುತಿಯಿಂದಲೂ ಕೂಡಿದವನಾದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು