Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:17 - ಕನ್ನಡ ಸತ್ಯವೇದವು J.V. (BSI)

17 ಅವನ ಜೀವಮಾನವೆಲ್ಲಾ ಅವನ ಊಟದಲ್ಲಿ ಕತ್ತಲು ಕವಿದಿರುವದು; ಅವನಿಗೆ ಕರಕರೆಯು ಶಾನೆ; ರೋಗರೋಷಗಳು ಇದ್ದೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:17
21 ತಿಳಿವುಗಳ ಹೋಲಿಕೆ  

ಬೆಳಗಾಗುವದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು.


ಮತ್ತೊಬ್ಬನು ಲೇಶವೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಸಾಯುವನು.


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.


ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಜಾಳಾಂಧರ ಕಿಟಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬದನ್ನು ವಿಚಾರಿಸಿರಿ ಎಂದು ಹೇಳಿಕಳುಹಿಸಿದನು.


ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.


ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ಅವನ ದಿನಗಳೆಲ್ಲಾ ವ್ಯಸನಮಯವೇ, ಅವನ ಕೆಲಸವು ತೊಂದರೆಯೇ; ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ನಿಲುಗಡೆಯಿಲ್ಲ. ಇದೂ ವ್ಯರ್ಥ.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.


ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.


ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು