Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:2 - ಕನ್ನಡ ಸತ್ಯವೇದವು J.V. (BSI)

2 ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:2
24 ತಿಳಿವುಗಳ ಹೋಲಿಕೆ  

ಮತ್ತೂ ಆತನು ಯಾವನಿಗೆ ಆಸ್ತಿಪಾಸ್ತಿಗಳನ್ನು ದಯಪಾಲಿಸುವದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ಇದಲ್ಲದೆ ನೀನು ಕೇಳದಂಥದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ ಘನದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವದಿಲ್ಲ.


ನಮ್ಮ ಸ್ವಾಸ್ತ್ಯವು ಪರರ ಪಾಲಾಗಿದೆ, ನಮ್ಮ ಮನೆಗಳು ಹೆರರ ಕೈಗೆ ಸಿಕ್ಕಿವೆ.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ಬಂದಂತೆಯೇ ಗತಿಸುವನು; ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು? ಇದೇ ಕೇವಲ ದುರ್ದಶೆ.


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು.


ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ಯೆಹೋವನು ಇಸ್ರಾಯೇಲ್ಯರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲ್ಯರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು