Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:3 - ಕನ್ನಡ ಸತ್ಯವೇದವು J.V. (BSI)

3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:3
23 ತಿಳಿವುಗಳ ಹೋಲಿಕೆ  

ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದ ಹೂಳಿಟ್ಟ ಪಿಂಡದಂತೆಯಾಗಲಿ ಬೆಳಕನ್ನೇ ಕಾಣದೆ ಸತ್ತ ಕೂಸುಗಳಂತೆಯಾಗಲಿ ಆಗಿದ್ದರೆ ಜನ್ಮವಿಲ್ಲದೆ ಇರುತ್ತಿದ್ದೆನು.


ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.


ಹೌದು, ಈ ಉಭಯರಿಗಿಂತಲೂ ಇನ್ನು ಹುಟ್ಟದೆ ಲೋಕದಲ್ಲಿನ ಅಧರ್ಮವನ್ನು ನೋಡದೆ ಇರುವವನೇ ಲೇಸೆಂದು ತಿಳಿದುಕೊಂಡೆನು.


ಸೇವಕರು ಶವವನ್ನು ಸಮಾಧಿಮಾಡುವದಕ್ಕಾಗಿ ಹೋದರು; ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ


ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.


ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು.


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ; ಹೆತ್ತವರು ಮಕ್ಕಳಿಗೆ ಭೂಷಣ.


ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಲ್ಲಿಯೂ ರಾಜ ಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿದ ಮೇಲೆ -


ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.


ನನಗೆ ದಯಪಾಲಿಸಿದ ಅನೇಕ ಮಂದಿ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್‍ಸಿಂಹಾಸನದ ಮೇಲೆ ಕುಳ್ಳಿರಿಸುವದಕ್ಕೋಸ್ಕರ ಆರಿಸಿಕೊಂಡನು.


ಸಮಾರ್ಯಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತುಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.


ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು.


ಅದು ವ್ಯರ್ಥತ್ವದಲ್ಲಿ ಬರುತ್ತದೆ, ಕತ್ತಲಲ್ಲಿ ಹೋಗುತ್ತದೆ, ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ;


ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು