Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:9 - ಕನ್ನಡ ಸತ್ಯವೇದವು J.V. (BSI)

9 ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದುರಾಶೆಪಡುವುದಕ್ಕಿಂತ ಇರುವುದರಲ್ಲಿ ಸಂತೋಷಪಡುವುದೇ ಉತ್ತಮ. ದುರಾಶೆಯಿಂದ ಪ್ರಯೋಜನವಿಲ್ಲ. ಅದು ಸಹ ಗಾಳಿಯನ್ನು ಹಿಂದಟ್ಟಿದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದು ಉತ್ತಮ. ಗಾಳಿಯನ್ನು ಬೆನ್ನಟ್ಟಿದಂತೆ ಇದೂ ಕೂಡ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:9
13 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಡೆಯುವ ಕೆಲಸಗಳನ್ನೆಲ್ಲಾ ನೋಡಿದ್ದೇನೆ; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.


ಪ್ರಸಂಗಿಯು ಹೀಗೆ ಹೇಳುತ್ತಾನೆ - ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಜ್ಞಾನವನ್ನಲ್ಲದೆ ಮರುಳುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ಎಂದು ಅರಿತುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು