Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:1 - ಕನ್ನಡ ಸತ್ಯವೇದವು J.V. (BSI)

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನನದ ದಿನಕ್ಕಿಂತ ಮರಣದ ದಿನ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:1
23 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿ ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.


ಇದನ್ನು ನೋಡಿ ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು;


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.


ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.


ತೈಲವೂ ಸುಗಂಧದ್ರವ್ಯಗಳೂ ಹೇಗೋ ವಿುತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.


ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರುವಾಸಿಯನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತ ನಾಮವನ್ನು ಅನುಗ್ರಹಿಸುವೆನು.


ಕಣ್ಣಿಗೆ ಬಿದ್ದ ಬೆಳಕು ಹೃದಯಕ್ಕೆ ಆನಂದ; ಕಿವಿಗೆ ಬಿದ್ದ ಒಳ್ಳೇ ಸುದ್ದಿ ಎಲುಬಿಗೆ ಪುಷ್ಟಿ.


ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ


ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಹೆಸರನ್ನು ಸಂಪಾದಿಸಿಕೊಂಡಿದ್ದರೂ ವಾಗ್ದಾನದ ಫಲವನ್ನು ಹೊಂದಲಿಲ್ಲ;


ನಮ್ಮ ಪೂರ್ವಿಕರು ನಂಬಿಕೆಯುಳ್ಳವರಾಗಿದ್ದದರಿಂದಲೇ ಒಳ್ಳೇ ಹೆಸರನ್ನು ಹೊಂದಿದರು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.


ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತುಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.


ಅದನ್ನು ಕೇಳುವವನು ನಿನ್ನನ್ನು ದೂಷಿಸಾನು; ನಿನಗೆ ಬಂದ ಅಪಕೀರ್ತಿಯು ಹೋಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು