Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:12 - ಕನ್ನಡ ಸತ್ಯವೇದವು J.V. (BSI)

12 ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನಕ್ಕೆ ವಿಶೇಷವೇನಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜ್ಞಾನಿಯು ಐಶ್ವರ್ಯವಂತನಾಗುವನು; ಜ್ಞಾನವು ತನ್ನ ಯಜಮಾನನನ್ನು ನೋಡಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಧನವು ಹೇಗೋ ಹಾಗೆ ಜ್ಞಾನವು ಆಶ್ರಯ. ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, ಅದು ಜ್ಞಾನಿಗೆ ಜೀವದಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:12
25 ತಿಳಿವುಗಳ ಹೋಲಿಕೆ  

ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಯೆಹೋವನ ಕಟಾಕ್ಷಕ್ಕೆ ಗುರಿಯಾಗುವನು.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಸ್ಸಿನ ವರುಷಗಳು ವೃದ್ಧಿಯಾಗುವವು.


ಬುದ್ಧಿಯು ನಿನಗೆ ಕಾವಲಾಗಿರುವದು, ವಿವೇಕವು ನಿನ್ನನ್ನು ಕಾಪಾಡುವದು;


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವದರಿಂದಲೇ ಬಹುಕಾಲ ಇರುವಿರಿ ಎಂದು ಹೇಳಿದನು.


ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


ಬಡವನು ನೆರೆಯವನಿಗೂ ಅಸಹ್ಯ; ಧನವಂತನಿಗೆ ಬಹು ಜನ ವಿುತ್ರರು.


ಆಗ ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವಂತೆ ಜ್ಞಾನವೂ ಮೂಢತ್ವಕ್ಕಿಂತ ಶ್ರೇಷ್ಠವೆಂದು ಗೋಚರವಾಯಿತು.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು.


ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು