Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:10 - ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವದನ್ನು ಕಂಡೆನು, ಅವರು [ಸುಖವಾಗಿ] ಗತಿಸಿದರು; ಧಾರ್ಮಿಕರೋ ಪರಿಶುದ್ಧಸ್ಥಾನದಿಂದ ತೊಲಗಬೇಕಾಯಿತು, ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು; ಇದೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನೂ ನಾನು ನೋಡಿದ್ದೇನೆ. ಆದರೆ ಜನರು ಪರಿಶುದ್ಧ ಸ್ಥಳಕ್ಕೆ ಹೋಗಿ ಬಂದ ಆ ದುಷ್ಟರನ್ನು ಅವರಿದ್ದ ಪಟ್ಟಣದಲ್ಲಿ ಹೊಗಳುತ್ತಾರೆ. ಇದೂ ಸಹ ನಿರರ್ಥಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:10
14 ತಿಳಿವುಗಳ ಹೋಲಿಕೆ  

ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ.


ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು. ಆ ಸಾಕ್ಷಿಗಳು - ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತಾಡುವದನ್ನು ಬಿಡುವದೇ ಇಲ್ಲ.


ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.


ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.


ಹಿಂದಿನ ತಲಾಂತರಗಳ ಜ್ಞಾಪಕವು [ಈಗಿನವರಿಗೆ] ಇಲ್ಲ; ಮುಂದಿನ ತಲಾಂತರಗಳ ಜ್ಞಾಪಕವೂ ಅವುಗಳ ಮುಂದಿನ ತಲಾಂತರಗಳಿಗೆ ಇರುವದಿಲ್ಲ.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.


ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸರ್ತಿ? ಎಷ್ಟಾವರ್ತಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು; ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು