Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:12 - ಕನ್ನಡ ಸತ್ಯವೇದವು J.V. (BSI)

12 ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:12
28 ತಿಳಿವುಗಳ ಹೋಲಿಕೆ  

ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು; ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ಸೈತಾನನ ಉರ್ಲಿಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವದಕ್ಕೆ ಸ್ವಸ್ಥಚಿತ್ತರಾದಾರು.


ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ.


ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.


ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಕಳ್ಳನು ಬರುವ ಗಳಿಗೆಯು ಮನೇಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವದು; ಎಲ್ಲಕ್ಕೂ ಪ್ರಾಣ ಒಂದೇ; ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ; ಎಲ್ಲಾ ಬರೀ ಗಾಳಿಯೇ.


ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು; ಅದು ದೊಡ್ಡದೆಂದು ತೋಚಿತು;


ಭಯದ ಸಪ್ಪಳದಿಂದ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂವಿುಯ ಅಸ್ತಿವಾರಗಳು ಕಂಪಿಸುತ್ತಿವೆ.


ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚುಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಯ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿರೋಧವು ಕಾದಿದೆ.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ ಹಾಗೆ ತಮ್ಮ ಮರಣದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ; ಯುದ್ಧಕಾಲದಲ್ಲಿ ಹೇಗೆ ವಿರಾಮ ದೊರೆಯುವದಿಲ್ಲವೋ ಹಾಗೆ ಅಧರ್ಮಕ್ಕೊಳಪಟ್ಟವನಿಗೆ ಬಿಡುಗಡೆಯಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಗುಂಪಾಗಿ ಕೂಡಿದ ಬಹುಜನಾಂಗಗಳವರ ಕೈಯಿಂದ ನಾನು ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.


ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು; ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು