Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:18 - ಕನ್ನಡ ಸತ್ಯವೇದವು J.V. (BSI)

18 ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:18
22 ತಿಳಿವುಗಳ ಹೋಲಿಕೆ  

ಆಯಿ ಎಂಬ ಊರಿನವರು ಅವರನ್ನು ಊರುಬಾಗಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿ ನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಹತಮಾಡಿದರು. ಇದರಿಂದ ಇಸ್ರಾಯೇಲ್ಯರ ಧೈರ್ಯವು ಕರಗಿ ನೀರಾಯಿತು.


ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದರಿಂದ ಇಸ್ರಾಯೇಲ್ಯರೆಲ್ಲರೂ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು.


ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.


ಯನ್ನ ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಆ ಮನುಷ್ಯರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಬುದ್ಧಿಗೆಟ್ಟವರೂ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರೂ ಆಗಿದ್ದಾರೆ.


ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಮತ್ತು ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ ಎಂದು ಹೇಳಿದರು.


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಆಗ ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವಂತೆ ಜ್ಞಾನವೂ ಮೂಢತ್ವಕ್ಕಿಂತ ಶ್ರೇಷ್ಠವೆಂದು ಗೋಚರವಾಯಿತು.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನಕ್ಕೆ ವಿಶೇಷವೇನಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬದೇ.


ಜನರು ತಾವು ಇಂದು ಶತ್ರುಗಳಿಂದ ಸುಲುಕೊಂಡ ಆಹಾರವನ್ನು ಯಥೇಚ್ಫವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತವಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.


ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು.


ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.


ಮೊಂಡುಕೊಡಲಿಯ ಬಾಯಿ ಮೊನೆಮಾಡದಿದ್ದರೆ ಹೆಚ್ಚು ಬಲವನ್ನು ಪ್ರಯೋಗಿಸಬೇಕಲ್ಲವೆ; ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು