Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:7 - ಕನ್ನಡ ಸತ್ಯವೇದವು J.V. (BSI)

7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:7
24 ತಿಳಿವುಗಳ ಹೋಲಿಕೆ  

ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಮತ್ತು ಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವದಕ್ಕಿಂತ ಅವನಿಗೆ ಲೋಕದಲ್ಲಿ ಇನ್ನಾವ ಮೇಲೂ ಇಲ್ಲವೆಂದು ಸಂತೋಷವನ್ನೇ ಸ್ತುತಿಸಿದೆನು; ದೇವರು ಅವನಿಗೆ ಲೋಕದಲ್ಲಿ ಅನುಗ್ರಹಿಸುವ ದಿನಗಳಲ್ಲೆಲ್ಲಾ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವದು.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಯೇಸು ಅವನಿಗೆ - ನಿನ್ನ ಮಗನು ಬದುಕುತ್ತಾನೆ ಹೋಗು ಎಂದು ಉತ್ತರ ಕೊಟ್ಟನು. ಆ ಗೃಹಸ್ಥನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ಆತನು - ಈ ಮಾತನ್ನು ಹೇಳಿದ್ದರಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಬಿಟ್ಟಿದೆ, ಹೋಗು ಅಂದನು.


ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು ಎಂದು ಹೇಳಿ


ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.


ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ.


ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು