Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:20 - ಕನ್ನಡ ಸತ್ಯವೇದವು J.V. (BSI)

20 ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶಿ ಮಟ್ಲ್ಯಾರ್, ಮಿಯಾ ಕಚ್ಚ್ಯಾ ವಿಶಯಾತ್ಬಿ ಮರ್ಯಾದ್ ಕರುನ್ ಘೆಯ್ನಸ್ತಾನಾ ಅದ್ದಿ ಹೊತ್ತ್ಯಾ ಸಾರ್ಕೆಚ್ ಅತ್ತಾಬಿ ಧೈರ್ಯಾನ್ ಹೊತ್ತ್ಯಾ ಸಾಟ್ನಿ ಝಿತ್ತೊ ರ್‍ಹಾಲ್ಯಾರ್‍ಬಿ ನಾ ತರ್ ಮರ್ಲ್ಯಾಬಿ ಮಾಜ್ಯಾ ಅಂಗಾನಿ ಕ್ರಿಸ್ತಾಕ್ ಮಹಿಮಾ ಹೊತಾ ಮನುನ್ ಮಾಕಾ ಆಶ್ಯಾ ಹಾಯ್ ಅನಿ ತಸೆಚ್ ಹೊತಾ ಮನ್ತಲೊ ಬರೊಸೊಬಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:20
41 ತಿಳಿವುಗಳ ಹೋಲಿಕೆ  

ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾಚಿಕೆಪಡುವದಕ್ಕೆ ಕಾರಣವಾಗುವದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವದಕ್ಕಲ್ಲ ಕಟ್ಟುವದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.


ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ.


ಅದರಂತೆ ಮುತ್ತೈದೆಗೂ ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಿಲ್ಲದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ;


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು.


ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು; ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ.


ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.


ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗಿರುವ ಹೆಚ್ಚಳದ ಮೇಲೆ ಆಣೆ ಇಟ್ಟು ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು.


ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಶಿಷ್ಟನ ನಂಬಿಕೆಗೆ ಆನಂದವು ಫಲ; ದುಷ್ಟನ ನಿರೀಕ್ಷೆ ನಿಷ್ಫಲ.


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.


ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ನಿಮ್ಮಲ್ಲಿ ನನಗೆ ಬಹಳ ಭರವಸ ಉಂಟು; ನಿಮ್ಮ ವಿಷಯದಲ್ಲಿ ನನ್ನ ಉತ್ಸಾಹ ಬಹಳ; ಪರಿಪೂರ್ಣ ಆದರಣೆ ನನಗಾಯಿತು; ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ತುಂಬಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು