Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಸಗ್ಳ್ಯಾಂಚ್ಯಾಸಾಟ್ನಿ ಮಾಕಾ ಅಶೆ ದಿಸ್ತಲೆ ಸಮಾಚ್ ಹಾಯ್, ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾಬಿ, ಬರ್‍ಯಾ ಖಬ್ರೆಸಾಟ್ನಿ ಹೊಲ್ಲ್ಯಾ ವಾದಾತ್ನಿ ತುಮಿ ಸಗ್ಳ್ಯೆ ಮಾಜ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆತ್ ವಾಟೊ ಘೆಟ್ಲ್ಯಾಶಿ, ಮನುನ್ ತುಮ್ಕಾ ಮಾಜ್ಯಾ ಮನಾತ್ ಥವ್ನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:7
34 ತಿಳಿವುಗಳ ಹೋಲಿಕೆ  

ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ. ಕೂಡಾ ಸಾಯುವದಕ್ಕೂ ಕೂಡಾ ಬದುಕುವದಕ್ಕೂ ನೀವು ನಮ್ಮ ಹೃದಯದಲ್ಲಿದ್ದೀರೆಂದು ಮೊದಲೇ ಹೇಳಿದ್ದೇನಲ್ಲಾ.


ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಇದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರರಾಗಿದ್ದದ್ದು ಒಳ್ಳೇದಾಯಿತು.


ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.


ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.


ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ; ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ನೀವೆಲ್ಲರು ಬೆಳಕಿನವರೂ ಹಗಲಿನವರೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.


ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ನೀವೇ ನಮ್ಮ ಯೋಗ್ಯತಾಪತ್ರ; ಅದು ನಮ್ಮ ಹೃದಯಗಳಲ್ಲೇ ಬರೆದದೆ; ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.


ಎಲ್ಲವನ್ನೂ ಅಡಗಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ಸಹಿಸಿಕೊಳ್ಳುತ್ತದೆ.


ನಾನು ಇತರರ ಸಂಗಡ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ಅಪೇಕ್ಷಿಸುತ್ತೇನೆ.


ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿವಿುತ್ತವೇ ಎಂದು ಅರಮನೆಯ ಪಹರೆಯವರೆಲ್ಲರಿಗೂ ವಿುಕ್ಕಾದವರೆಲ್ಲರಿಗೂ ಪ್ರಸಿದ್ಧವಾಯಿತು.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ.


ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.


ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.


ಇದಲ್ಲದೆ ಫಿಲಿಪ್ಪಿಯವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನ್ಯದಿಂದ ಹೊರಟು ಹೋದಾಗ ಕೊಡುವ ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಗೂ ನನಗೂ ಸಂಬಂಧವಿರಲಿಲ್ಲವೆಂದು ನೀವೂ ಬಲ್ಲಿರಿ.


ನಾನು ಸುವಾರ್ತೆಯ ನಿವಿುತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಯೋಚಿಸಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು